ಕೋಲ್ಕತಾ, ಫೆ 17 (DaijiworldNews/HR): ಬಿಬಿಸಿ ಇಂಡಿಯಾದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಮೇಲೆ ದಾಳಿ ನಡೆಸಿರುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಸೇಡು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇದು ಅತ್ಯಂತ ದುರದೃಷ್ಟಕರವಾಗಿದ್ದು, ಇದು ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಕ್ರಮವಾಗಿದೆ. ಇಂತಹ ಕ್ರಮಗಳು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತವೆ, ಕೇಸರಿ ಪಕ್ಷವು ಮಾಧ್ಯಮವನ್ನು ನಿಯಂತ್ರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಬಿಜೆಪಿಯವರು ಒಂದು ದಿನ ದೇಶದಲ್ಲಿ ಮಾಧ್ಯಮವೇ ಇಲ್ಲದಂತೆ ಮಾಡುತ್ತಾರೆ. ಕೇಂದ್ರ ನಾಯಕರು ಜನಾದೇಶದ ಬಗ್ಗೆ ಕಾಳಜಿ ವಹಿಸುವುದಿಲ್ಲ, ಅವರ ಏಕೈಕ ಜನಾದೇಶ ಸರ್ವಾಧಿಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.