ಕೊಟ್ಟಾಯಂ, ಫೆ 18 (DaijiworldNews/HR): ಮಂಕಿಪಾಕ್ಸ್ ಪಾಸಿಟಿವ್ ಬಂದ ವ್ಯಕ್ತಿಯೊಂದಿಗೆ ಪ್ರಯಾಣಿಸಿದ ಇಬ್ಬರು ವ್ಯಕ್ತಿಗಳನ್ನು ಕೊಟ್ಟಾಯಂ ಜಿಲ್ಲೆಯಲ್ಲಿ ನಿಗಾವಹಿಸಲಾಗಿದೆ ಎಂದು ವರದಿಯಾಗಿದೆ.
ಈ ಕುರಿತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದು, ಮಂಕಿಪಾಕ್ಸ್ ಪಾಸಿಟಿವ್ ಬಂದ ಕೊಲ್ಲಂ ಮೂಲದ ವ್ಯಕ್ತಿಯೊಂದಿಗೆ ಇಬ್ಬರೂ ಯುವಕರು ವಿಮಾನದಲ್ಲಿ ಪ್ರಯಾಣಿಸಿದ್ದು, ಇದೀಗ ಇಬ್ಬರೂ ಪ್ರಸ್ತುತ ಲಕ್ಷಣರಹಿತರಾಗಿದ್ದಾರೆ ಮತ್ತು ಭಯಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದರು.
ಇನ್ನು ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳ ಜನರು ವಿಮಾನದಲ್ಲಿ ಸಂಪರ್ಕದಲ್ಲಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕತೆಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.