ಹೈದರಾಬಾದ್, ಫೆ 21 (DaijiworldNews/HR): ಹೈದರಾಬಾದ್ನಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ್ದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಹೈದರಾಬಾದ್ನಿಂದ ಚೆನ್ನೈಗೆ ವಿಮಾನ ಹೊರಟಿದ್ದು, ಈ ವೇಳೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.
ಇನ್ನು ಬಾಂಬ್ ಬೆದರಿಕೆ ಕರೆ ಬಂದ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗಳು ವಿಮಾನ ಪರಿಶೀಲನೆ ನಡೆಸಿದ್ದು, ಪ್ರಯಾಣಿಕರನ್ನು ಬೇರೆಡೆಗೆ ಸ್ಥಳಾಂತರಿಸಿದರು.
ಬಾಂಬ್ ನಿಷ್ಕ್ರಿಯ ದಳಕ್ಕೆ ವಿಮಾನದಲ್ಲಿ ಬಾಂಬ್ ಪತ್ತೆಯಾಗಿಲ್ಲ. ಇದರಿಂದ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ, ಬಾಂಬ್ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.