ನವದೆಹಲಿ, ಫೆ 21 (DaijiworldNews/HR): ಎರಡು ವರ್ಷಗಳ ಅವಧಿಗೆ ನೀತಿ ಆಯೋಗದ ಸಿಇಒ ಆಗಿ ನೇಮಕಗೊಂಡಿದ್ದ ಪರಮೇಶ್ವರನ್ ಅಯ್ಯರ್ ಅವರು ಏಳು ತಿಂಗಳ ನಂತರ ಸೋಮವಾರ ಆ ಹುದ್ದೆಯಿಂದ ಕೆಳಗಿಳಿದಿದ್ದು, ಇದೀಗ ಸರ್ಕಾರವು ಬಿವಿಆರ್ ಸುಬ್ರಹ್ಮಣ್ಯಂ ಅವರನ್ನು ಮುಂದಿನ ಸಿಇಒ ಆಗಿ ನೇಮಿಸಿದೆ.
1987ರ ಬ್ಯಾಚ್ನ ಛತ್ತೀಸ್ಗಢ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, ವಾಣಿಜ್ಯ ಕಾರ್ಯದರ್ಶಿಯಾಗಿ ನಿವೃತ್ತರಾದ ಸುಬ್ರಹ್ಮಣ್ಯಂ ಅವರು ಈ ಹಿಂದೆ ಪ್ರಧಾನ ಮಂತ್ರಿ ಕಚೇರಿಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ.
ಇನ್ನು ಸಚಿವ ಸಂಪುಟದ ನೇಮಕಾತಿ ಸಮಿತಿಯು ಸುಬ್ರಹ್ಮಣ್ಯಂ ಅವರ ನೇಮಕವನ್ನು ಹುದ್ದೆಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.