ಚಾಮರಾಜನಗರ, ಫೆ 21 (DaijiworldNews/HR): ಸಿದ್ದರಾಮಯ್ಯನವರು ಕರ್ನಾಟಕದ ದೊಡ್ಡ ಆಸ್ತಿ. ಅಂತಹವರನ್ನು ಕೊಲೆ ಮಾಡಿ ಎಂದು ಸಚಿವರೊಬ್ಬರು ಹೇಳಿಕೆ ಕೊಟ್ಟರೂ ರಾಜ್ಯ ಸರ್ಕಾರ ಇನ್ನೂ ಯಾವುದೇ ಕ್ರಮ ತೆಗೆದುಕೊಳ್ಳದೆ ಏನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಜನರನ್ನು ಜೋಡಿಸುವ ಕೆಲಸ ಮಾಡುತ್ತದೆ. ನಾವು ಅಧಿಕಾರಕ್ಕೆ ಬಂದರೆ 250 ಯೂನಿಟ್ ಉಚಿತ ವಿದ್ಯುತ್, ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2 ಸಾವಿರ ಸಹಾಯಧನ ನೀಡಲಾಗುವುದು ಎಂದರು.
ಇನ್ನು ಪ್ರಜಾಧ್ವನಿ ಸಮಾವೇಶವು ಒಂದು ಐತಿಹಾಸಿಕ ಸಮಾವೇಶವಾಗಿದ್ದು, ಶಾಸಕರಾಗಿ ಆರ್.ನರೇಂದ್ರ, ಸಂಸದರಾಗಿ ಆರ್.ಧ್ರುವನಾರಾಯಣ ಅವರು 200 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅದೆಲ್ಲ ಸಿದ್ದರಾಮಯ್ಯ ಅವರ ಕಾಲದಲ್ಲಿ ಆಗಿದ್ದು ಎಂದು ಹೇಳಿದ್ದಾರೆ.