ಬೆಂಗಳೂರು,ಫೆ 21 (DaijiworldNews/MS): ಐಪಿಎಸ್ ರೂಪಾ.ಡಿ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಬ್ಬರನ್ನು ಬೇರೆಡೆಗೆ ವರ್ಗಾವಣೆ ಮಾಡಿ ವೈಯಕ್ತಿಕ ಜಗಳಕ್ಕೆ ಸರ್ಕಾರ ಬ್ರೇಕ್ ಹಾಕಿದ ಬೆನ್ನಲ್ಲೇ ಡಿ.ರೂಪಾ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ಹೊರ ಬಿದ್ದಿದ್ದು ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಂತಾಗಿದೆ.
ವೈರಲ್ ಆಗಿರುವಂತ ಆಡಿಯೋದಲ್ಲಿ ರೂಪಾ ಅವರು ಮಾತನಾಡಿದ್ದಾರೆ ಎನ್ನಲಾಗಿದ್ದು,ಅವರು ಸಾಮಾಜಿಕ ಕಾರ್ಯಕರ್ತ ಗಂಗರಾಜುವಿಗೆ ರೋಹಿಣಿ ವಿರುದ್ದ ದೂರು ನೀಡುವಂತೆ ಒತ್ತಡ ಹೇರಿದ್ದಾರೆ. ರೋಹಿಣಿ ಫ್ಯಾಮಿಲಿದು ಲ್ಯಾಂಡ್ ಡೀಲ್ ಬ್ಯುಸಿನೆಸ್. ಗಂಡನ ರಿಯಲ್ ಎಸ್ಟೇಟ್ ಪ್ರಮೋಟ್ ಮಾಡಲು ಮಾಹಿತಿ ಸಂಗ್ರಹಿಸಿದ್ದಾಳೆ ಆಕೆ . ನಾನೇ ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ ಎಂದು ಹೇಳಿದ್ದು, ಆಡಿಯೋದಲ್ಲಿದೆ.
ಈ ಮೂಲಕ ರೂಪಾ, ಗಂಗರಾಜು ನಡುವಿನ ಸಂಭಾಷಣೆ ಆಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡುತ್ತಿದೆ.
ನಿನ್ನೆಷ್ಟೇ ರಾಜ್ಯ ಸರ್ಕಾರದಿಂದ ಅಖಿಲ ಭಾರತ ಸೇವಾ ನಿಯಮಗಳಿಗೆ ಬದ್ಧರಾಗಿ ನಡೆದುಕೊಳ್ಳುವಂತೆ ರೂಪಾ, ಸಿಂಧೂರಿಗೆ ಖಡಕ್ ವಾರ್ನಿಂಗ್ ನೀಡಿತ್ತು. ಅಲ್ಲದೇ ರೋಹಿಣಿ ಸಿಂಧೂರಿ ಹಾಗೂ ರೂಪಾಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಿತ್ತು. ರೂಪಾ ಪತಿ ಮನೀಶ್ ಮೌದ್ಗಿಲ್ ಅವರನ್ನು ಕಂದಾಯ ಇಲಾಖೆಯಿಂದ ಬೇರೊಂದು ಇಲಾಖೆಗೆ ಎತ್ತಂಗಡಿ ಮಾಡಿತ್ತು.