ಬೆಂಗಳೂರು, ಫೆ 22 (DaijiworldNews/MS): ಐಪಿಎಸ್ ಅಧಿಕಾರಿ ರೂಪಾ ಫೇಸ್ಬುಕ್ನಲ್ಲಿ ರೋಹಿಣಿ ವಿರುದ್ಧ ಗಂಭೀರ ಆರೋಪದ ಪೋಸ್ಟ್ ಹಾಕಿದ್ದಾರೆ.
"ಆತ್ಮೀಯ ಮಾಧ್ಯಮ ಮಿತ್ರರೇ, ನಾನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎತ್ತಿರುವ ಭ್ರಷ್ಟಾಚಾರದ ವಿಷಯದ ಬಗ್ಗೆ ಗಮನಹರಿಸಿ. ಜನಸಾಮಾನ್ಯರ ಮೇಲೆ ಹೆಚ್ಚು ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ಧ ಹೋರಾಡುವುದಕ್ಕೆ ನಾನು ಯಾರನ್ನೂ ತಡೆದಿಲ್ಲ. ಅದೇ ಸಮಯದಲ್ಲಿ, ಮಾದರಿ(PATTERN) ಎಂಬ ಇಂಗ್ಲಿಷ್ ಪದಕ್ಕೆ ಒತ್ತು ನೀಡಿ ಅಧಿಕಾರಿಗಳ ನಡುವಿನ ಸಂಬಂಧದಿಂದ ಸಂಸಾರಕ್ಕೆ ಕುತ್ತು ಬರುವ ವಿಚಾರವನ್ನು ಕೂಡ ರೂಪಾ ಇಲ್ಲಿ ಪ್ರಸ್ತಾಪಿಸಿದ್ದಾರೆ.
"ಕರ್ನಾಟಕದಲ್ಲಿ ಒಬ್ಬ ಐಎಎಸ್ ಅಧಿಕಾರಿ ಸತ್ತರೆ ತಮಿಳುನಾಡಿನಲ್ಲಿ ಒಬ್ಬ ಐಪಿಎಸ್ ಅಧಿಕಾರಿ ಸತ್ತರೆ, ಕರ್ನಾಟಕದಲ್ಲಿ ಮತ್ತೋರ್ವ ಐಎಎಸ್ ಪತಿ-ಪತ್ನಿ ವಿಚ್ಛೇದನ ಪಡೆದಿದ್ದಾರೆ. ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗಿದ್ದೇವೆ. ನಾವು ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಕುಟುಂಬಕ್ಕೆ ಅಡ್ಡಿಯಾಗುತ್ತಿರುವ ನಡೆ ಪ್ರದರ್ಶಿಸುವ ಅಪರಾಧಿಯ ದಯವಿಟ್ಟು ಪ್ರಶ್ನಿಸಿ. ಇಲ್ಲದಿದ್ದರೆ ಹಲವು ಕುಟುಂಬ ನಾಶವಾಗುತ್ತವೆ" ಎಂದಿದ್ದಾರೆ.
" ನಾನು ಮಾನಸಿಕವಾಗಿ ಶಕ್ತಿಯುತ ಮಹಿಳೆಯಿದ್ದೇನೆ.ಹೋರಾಟ ನಡೆಸುವ ಶಕ್ತಿ ನನಗಿದೆ. ಎಲ್ಲಾ ಮಹಿಳೆಯರಿಗೆ ಹೋರಾಡಲು ಒಂದೇ ರೀತಿಯ ಶಕ್ತಿ ಇರುವುದಿಲ್ಲವಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಯಾಗಿರಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ. ಅದನ್ನು ಮುಂದುವರಿಸೋಣ. ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ತಾವು ಆರ್ ಟಿಐ ಕಾರ್ಯಕರ್ತ ಗಂಗರಾಜು ಜೊತೆಗೆ ಫೋನ್ ನಲ್ಲಿ ನಡೆಸಿದ್ದ ಸಂಭಾಷಣೆ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿ ಪ್ರಸಾರವಾಗುತ್ತಿದ್ದಂತೆ ಐಪಿಎಸ್ ಅಧಿಕಾರಿ ಡಿ ರೂಪಾ ಇಂದು ಫೇಸ್ ಬುಕ್ ಪೋಸ್ಟನ್ನು ಹಾಕಿದ್ದಾರೆ.
ಇದಕ್ಕೂ ಮೊದಲು ರೂಪಾ ಗಂಗರಾಜು ಜೊತೆ ಮಾತನಾಡಿದ್ದಾರೆ ಎನ್ನಲಾದ ವೈರಲ್ ಆಗಿದ್ದ ಆಡಿಯೋದಲ್ಲಿ, "ಆಯಮ್ಮನ (ರೋಹಿಣಿ) ದಿಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ(ರೂಪಾ ಪತಿ) ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ" ಎಂದು ಕಿಡಿಕಾರಿದ್ದಾರೆ.